ಕುಂದಗೋಳ : ಬೆಳಗಾವಿಯಲ್ಲಿ ಡಿಸೆಂಬರ್ 10 ರಂದು ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ಉಪ ಸಮಾಜಗಳಿಗೆ ಓಬಿಸಿ ಮೀಸಲಾತಿ ಹಕ್ಕೊತ್ತಾಯ ಮಾಡಲು ಕೈಗೊಳ್ಳಲಿರುವ ಪ್ರತಿಭಟನೆ ಪೂರ್ವಭಾವಿ ಸಭೆ ನಾಳೆ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ಕಲ್ಯಾಣಪುರ ಮಠದಲ್ಲಿ ನಡೆಯಲಿದೆ.
ನಾಳೆ ನವೆಂಬರ್ 30 ರಂದು ಬೆಳಿಗ್ಗೆ 9 ಗಂಟೆಗೆ ಕೂಡಲಸಂಗಮ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕುಂದಗೋಳ ಕಲ್ಯಾಣಪುರ ಮಠದಲ್ಲಿ ನಡೆಯಲಿದೆ.
ಕುಂದಗೋಳ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಜನರು ಮುಖಂಡರು ಸಮಾಜದ ಹಿರಿಯರು ಈ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





