ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ನ್ನು ಖದೀಮರು ಹೊತ್ತೊಯ್ದಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.
ಉಪ್ಪಿನ ಬೆಟಗೇರಿ ಗ್ರಾಮದ ಬಸವರಾಜ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಬೈಕನ್ನೇ ಖದೀಮರು ಹೊತ್ತೊಯ್ದಿದ್ದಾರೆ. ಶನಿವಾರ ಸಂತೆಗೆಂದು ಬಸವರಾಜ ಬೈಕ್ ತೆಗೆದುಕೊಂಡು ಬಂದು ಮುತ್ತೂರ ಅವರ ಮನೆ ಎದುರು ನಿಲ್ಲಿಸಿ ಹೋಗಿದ್ದ. ಅಷ್ಟರಲ್ಲಾಗಲೇ KA-25 EY0473 ಸಂಖ್ಯೆಯ ಬೈಕ್ನ್ನು ಖದೀಮರು ತೆಗೆದುಕೊಂಡು ಹೋಗಿದ್ದಾರೆ.
ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿದ್ದು, ಬೈಕ್ ಮಾಲೀಕರು ಇದೀಗ ಗರಗ ಠಾಣೆಯಲ್ಲಿ ದೂರು ಕೊಡಲು ಮುಂದಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





