ಹಾವೇರಿ : ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜಿನಾಮೆಯಿಂದ ತೆರವಾದ ಶಿಗ್ಗಾವಿ ವಿಧಾನಸಭೆಯ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆದ್ದು ಶಾಸಕಸ್ತಾನಕ್ಕೇರಿದ್ದಾರೆ. ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಲು ಸಜ್ಜಾಗಿದ್ದಾರೆ.
ಇಂದು ಬೆಳಗಾವಿಯಲ್ಲಿ ಪ್ರಾರಂಭವಾಗಲಿರುವ ಅಧಿವೇಶನದಲ್ಲಿ ಶಾಸಕ ಪಠಾಣ್ ಅವರು ಮೊದಲ ಬಾರಿಗೆ ಸದನಕ್ಕೆ ಕಾಲಿಡಲಿದ್ದಾರೆ. ಶಿಗ್ಗಾಂವಿಯಲ್ಲಿ 1994ರಲ್ಲಿ ಕೊನೆ ಬಾರಿ ಗೆಲುವು ಕಂಡಿದ್ದ ಕಾಂಗ್ರೆಸ್, 3 ದಶಕದ ಬಳಿಕ ಈ ಬಾರಿ ಜಯಭೇರಿ ಬಾರಿಸಿತು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈವರೆಗೂ ಈ ಕ್ಷೇತ್ರದಲ್ಲಿ ಸತತ 4 ಬಾರಿ ಗೆಲು ಕಂಡಿದ್ದರು.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸೋಲುಂಡಿದ್ದ ಪಠಾಣ್, ಈ ಬಾರಿಯ ಉಪಸಮರದಲ್ಲಿ ಭರತ್ ಬೊಮ್ಮಾಯಿ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡಿದ್ದಾರೆ. ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದರು. ಒಟ್ಟಾರೆ ಯಾಸೀರ್ ಖಾನ್ ಪಠಾಣ್ 1,00,756 ಮತ ಪಡೆದಿದ್ದು, ಭರತ್ ಬೊಮ್ಮಾಯಿ 87,308 ಮತ ಪಡೆದಿದ್ದಾರೆ.
ಬಿಜೆಪಿ ನಂಬಿಕೊಂಡಿದ್ದ ಲಿಂಗಾಯತ ಮತದಾರಲ್ಲಿ ಅಲ್ಪ ಮತದಾರರು ಕಾಂಗ್ರೆಸ್ ಪರ ಮತ ಚಲಾಯಿಸಿದ್ದು. ಕಾಂಗ್ರೆಸ್ ಪಾಳಯ ಶಿಗ್ಗಾಂವಿಯಲ್ಲಿಯೇ ಬೀಡು ಬಿಟ್ಟು ಭರ್ಜರಿ ಪ್ರಚಾರ ಮಾಡಿದ್ದು ಪಠಾಣ್ಗೆ ವರವಾಯಿತು. ತನಗೆ ಟಿಕೆಟ್ ಬೇಕು ಎಂದು ಬಂಡಾಯವೆದ್ದಿ ಕಾಂಗ್ರೆಸ್ನ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರನ್ನು ಕೈಪಡೆ ಮನವೊಲಿಸಿ ಚುನಾವಣೆ ಎದುರಿಸಿದ ಹಿನ್ನೆಲೆಯಲ್ಲಿ ಪಠಾಣ್ ಗೆಲುವು ಸುಲಭವಾಯಿತು ಎಂದು ವಿಶ್ಲೇಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





