Breaking News

ಬೆಳಗಾವಿಯಲ್ಲಿ ಮತ್ತೆ ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಪ್ರತಿಭಟನೆ: ಹೆದ್ದಾರಿ ತಡೆದು ಹೋರಾಟಗಾರರಿಂದ ಆಕ್ರೋಶ

ಬೆಳಗಾವಿ: ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ.
ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.
ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.
ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಪಂಚಾಸಾಲಿ ಸಮುದಾಯದವರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *