ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಾದ ‘ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ’ಗೆ ಜೆಸ್ಕಾಂ ವ್ಯಾಪ್ತಿಯಲ್ಲಿ ಅರ್ಜಿಗಳ ಸಲ್ಲಿಕೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರೂ ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳುವಲ್ಲಿ ಗ್ರಾಹಕರು ನಿರಾಸಕ್ತಿ ತೋರುತ್ತಿದ್ದಾರೆ.
ಫೆಬ್ರುವರಿ 29ರಂದು ಈ ಯೋಜನೆಗೆ ಚಾಲನೆ ದೊರಕಿದ್ದು, 10 ತಿಂಗಳ ಅವಧಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ 7,083 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಇದರಲ್ಲಿ 244 ಜನರು ಮಾತ್ರ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದರೆ, ಯಾದಗಿರಿಯಲ್ಲಿ ಅತಿ ಕಡಿಮೆ ಅರ್ಜಿಗಳು ಸಲ್ಲಿಕೆಯಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ 2,336, ರಾಯಚೂರು ಜಿಲ್ಲೆಯಲ್ಲಿ 1,866, ಕಲಬುರಗಿಯಲ್ಲಿ 1,067, ಬಳ್ಳಾರಿಯಲ್ಲಿ 776, ವಿಜಯನಗರದಲ್ಲಿ 436, ಬೀದರ್ ಜಿಲ್ಲೆಯಲ್ಲಿ 376, ಯಾದಗಿರಿ ಜಿಲ್ಲೆಯಲ್ಲಿ 274 ಅರ್ಜಿಗಳು ಸಲ್ಲಿಕೆಯಾಗಿವೆ
bigtvnews | Hubli Dharwad News | Kannada News | Karnataka News Hubli News | News In Hubli | Local news

