ಗದಗ : ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು 200 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಕ್ಷೇತ್ರಕ್ಕೆ ನೂತನ ಕೃಷಿ ಕಾಲೇಜು ಸ್ಥಾಪನೆ ವಿಚಾರವಾಗಿ ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ, ಕ್ಷೇತ್ರದ ಶಾಸಕ ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ.
ಮುಂದಿನ ಬಜೆಟ್ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಆಗ್ರಹಿಸಿದ್ದಾರೆ ಎಂದರು.
ಜಿ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಿಎಂ ರೋಣ ಕ್ಷೇತ್ರದ ಜನರಿಗೂ ಅಭಯ ನೀಡಿದರು. ಇದೇ ವೇಳೆ ಸಿಎಂ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





