Breaking News

ಚಳಿಗಾಲ ಅಧಿವೇಶನ: ಇಂದಿನಿಂದ 3 ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ದಿ ಕುರಿತು ಚರ್ಚೆ

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಅಭಿವೃದ್ಧಿಯ ಕುರಿತು ಸೋಮವಾರದಿಂದ 3 ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ಆರಂಭವಾಗಲಿದ್ದು, ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರ ಚಿತ್ತ ವಿಧಾನಸಭೆಯ ಚರ್ಚೆಯತ್ತ ನೆಟ್ಟಿದೆ.
ಗಡಿನಾಡು ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಆದಾಗಿನಿಂದಲೂ ಚಳಿಗಾಲದ ಅಧಿವೇಶನವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ನೂರಾರು ಕೋಟಿ ರೂ.ಖರ್ಚು ಮಾಡಲಾಗುತ್ತಿದೆ. ಎಲ್ಲಿ ಅಧಿವೇಶನ ನಡೆದರೂ ಉತ್ತರ ಕರ್ನಾಟಕ ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿಯುವುದು ತಪ್ಪಿಲ್ಲ ಎನ್ನುವ ಭಾವನೆ ಈಗಲೂ ಇದೆ.
ಹೀಗಾಗಿ ಈ ಬಾರಿಯ ಅಧಿವೇಶನದ ಬಗ್ಗೆ ಜನರ ನಿರೀಕ್ಷೆ ಹೆಚ್ಚಾಗಿದ್ದು, 3 ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿಯ ಚರ್ಚೆಗೆಂದೇ ಮೀಸಲಿಡಲಾಗಿದೆ. ಈಗಾಗಲೇ ವಿಧಾನಪರಿಷತ್ತಿನಲ್ಲಿ ಈ ಭಾಗದ ನೀರಾವರಿ ಯೋಜನೆಗಳ ಕುರಿತಂತೆ ಚರ್ಚೆ ಆರಂಭವಾಗಿದ್ದು, ಸೋಮವಾರದಿಂದ ವಿಧಾನಸಭೆಯಲ್ಲೂ ಸಮಗ್ರ ಅಭಿವೃದ್ಧಿ ಬಗ್ಗೆ ಶಾಸಕರು ಬೆಳಕು ಚೆಲ್ಲಲಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *