Breaking News

ಚಳಿಗಾಲ ಅಧಿವೇಶನ: 5317,83 ಕೋಟಿ ರೂ. ಪೂರಕ ಅಂದಾಜು ಬೇಡಿಕೆ ಮಂಡನೆ

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದಲ್ಲಿ ಇಂದು ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು.
ಧನ ವಿನಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸಲು ಸಂವಿಧಾನದ 205(1)(ಎ)ರ ಅನುಚ್ಛೇದವು ಅವಕಾಶ ಕಲ್ಪಿಸಿದೆ. ಇದರ ಅನುಸಾರ ಕಂದಾಯ ಸಚಿವ ರೂ.5317.83 ಕೋಟಿ ಪೂರಕ ಅಂದಾಜುಗಳು ಎರಡನೇ ಕಂತಿನ ಬೇಡಿಕೆಯನ್ನು ಸದನದಲ್ಲಿ ಮಂಡಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *