Breaking News

ಎರಡು ಕುಟುಂಬಗಳ ಮಧ್ಯೆ ನಡೆದ ಜಗಳ

ಕುಂದಗೋಳ: ಕುಂದಗೋಳ ಪಟ್ಟಣದ ಅಂಬೇಡ್ಕ‌ರ್ ನಗರದಲ್ಲಿ ಎರಡು ಕುಟುಂಬಗಳ ಮಧ್ಯೆ ನಡೆದ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಕಳೆದ ಡಿಸೆಂಬರ್ 7ರಂದು ಕುಂದಗೋಳ ಪಟ್ಟಣದ ಬಸವರಾಜ ದೊಡ್ಡಮನಿ ಮತ್ತು ಮೀನಾಕ್ಷಿ, ನಿಂಗಪ್ಪ ಎಂಬುವರ ಮಧ್ಯೆ ಜಗಳ ನಡೆದಿತ್ತು. ಈ ವೇಳೆ ನನ್ನ ಮೇಲೆ 14 ಜನ ಆರೋಪಿಗಳು ಹಲ್ಲೆ ಮಾಡಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಸವರಾಜ ದೊಡ್ಡಮನಿ ಆರೋಪಿಸಿದ್ದಾರೆ. ಜೊತೆಗೆ 14 ಜನ ಆರೋಪಿಗಳ ಹೆಸರನ್ನು ಉಲ್ಲೇಖಿಸಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *