Breaking News

ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಉತ್ತರ ನೀಡಿದರು.
ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ. ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *