ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ ಸಿಗಬೇಕಾದ ಮೀಸಲಾತಿಯನ್ನು ಕಾನೂನು ಹೋರಾಟದ ಮೂಲಕವೇ ಪಡೆಯುತ್ತೇವೆ ಎಂದು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಸಮಾಜ ಹೋರಾಟ ಮಾಡುತ್ತಿದ್ದರೂ ಸರ್ಕಾರ ಮೀಸಲಾತಿ ಕೊಡುವಾಗ ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ನೀಡುತ್ತದೆ.
ಕೇಂದ್ರದಲ್ಲಿ ಓಬಿಸಿ ಯಲ್ಲಿ ಸೇರುವುದು ಮತ್ತು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಯಾವುದನ್ನು ನೀಡಬೇಕು ಎನ್ನುವ ಕುರಿತು ಚಿಂತನೆಯಾಗಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





