ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ಇಂದು ಕಲಬುರಗಿ ಮತ್ತು ಗದಗ-ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದು ಕಲಬುರಗಿ ಹಾಗೂ ಗದಗ-ಬೆಟಗೇರಿ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ. ವಿವಿಧ ದಲಿತಪರ ಸಂಘಟನೆಗಳಿಂದ ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಬೆಂಬಲ ಸೂಚಿಸಿದೆ. ರೋಣಾ ಶಾಸಕ ಜೆ.ಎಸ್. ಪಾಟೀಲ್ ಬಂದ್ ಬೆಂಬಲಿಸಿ ಪತ್ರ ಬರೆದಿದ್ದಾರೆ.
ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್ಗೆ ಕರೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಿಸಿದ್ದಾರೆ. ಬಂದ್ ಹಿನ್ನೆಲೆ ಇಂದು ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

