Breaking News

ಕೆಜಿಎಫ್ ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಅಗತ್ಯ ಕ್ರಮ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಹಾಸನ: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಕಾಫಿ ಬೆಳೆಗಾರರ ಒಕ್ಕೂಟ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
2011 ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗಿದೆ. ಇದು ಕಾಫಿಯ ಗುಣಮಟ್ಟವನ್ನು ಸುಧಾರಿಸಲು ಮತ್ತು ಯಾಂತ್ರೀಕರಣಕ್ಕೆ ಗಮನ ಹರಿಸುತ್ತದೆ. ಇದು ರೈತ ಉತ್ಪಾದಕ ಕಂಪನಿಗಳ ಮೂಲಕ ಅಗತ್ಯ ಸಲಕರಣೆಗಳನ್ನು ಒದಗಿಸಲು ಅನುಕೂಲ ಮಾಡಿಕೊಡುತ್ತದೆ. ಕಾಫಿಯ ಮೌಲ್ಯವನ್ನು ಹೆಚ್ಚಿಸಿದರೆ ಲಾಭ ಹೆಚ್ಚಾಗುತ್ತದೆ.
ಕಾಫಿ ಅಭಿವೃದ್ಧಿಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಅಗತ್ಯವಾದ ಹಣವನ್ನು ಒದಗಿಸಲು ಕೇಂದ್ರವು ಬದ್ಧವಾಗಿದೆ” ಎಂದು ಅವರು ಹೇಳಿದರು.
ಕಾಫಿ ಬೆಳೆಗಾರರಿಗೆ ಸಬ್ಸಿಡಿ ನೀಡಲು ಹೆಚ್ಚುವರಿಯಾಗಿ 100 ಕೋಟಿ ರೂ.ಗಳ ಅನುದಾನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಸಲ್ಲಿಸಿದ 21,000 ಅರ್ಜಿಗಳಿಗೆ ಸಬ್ಸಿಡಿ ನೀಡಲಾಗುವುದು ಎಂದು ಗೋಯಲ್ ಹೇಳಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *