Breaking News
Featured Video Play Icon

ಸಿಎಂಗೆ ಮನವಿ ಪತ್ರ ಬರೆದ ಸಂತೋಷ ಲಾಡ್..

BIGTV BIG IMPACT: ಸಿಎಂಗೆ ಮನವಿ ಪತ್ರ ಬರೆದ ಸಂತೋಷ ಲಾಡ್..

ಹುಬ್ಬಳ್ಳಿ: ಬೆಳಗಾವಿಯಲ್ಲಿ ಡಿ.26 ಮತ್ತು 27 ರಂದು ಹಮ್ಮಿಕೊಂಡಿರುವ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯು ಚಿರಕಾಲ ಇರಲು ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು, ನೌಕರರು ಕೆಲಸದ ದಿನಗಳಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸಬೇಕು ಎಂಬ ಆದೇಶವನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಮನವಿ ಮಾಡಿದ್ದಾರೆ.

ಖಾದಿ ಎಂಬುದು ಕೇವಲ ಬಟ್ಟೆಯಲ್ಲಿ ಅದೊಂದು ಜೀವನ ಪದ್ಧತಿ ಸ್ವಾವಲಂಬಿ ಬದುಕಿನ ರೂಪಕ ಖಾದಿ ತೊಟ್ಟವರಿಗೆ ಸತ್ಯ ಮತ್ತು ಅಹಿಂಸೆ ಕೂಡ ಒಂದು ಪ್ರತ ಎನ್ನುವ ಹಿರಿಯರ ನುಡಿಯಿರುತ್ತದೆ. ಗಾಂಧೀಜಿಯವರಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಹಾಗೂ ಸ್ವದೇಶಿ ಚಳವಳಿಯಲ್ಲಿ ಖಾದಿ ತಯಾರಿಕೆ ಮತ್ತು ಉಪಯೋಗಿಸುವುದು ಪ್ರಬಲ ಅಸ್ತ್ರವಾಗಿತ್ತು ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಬಗ್ಗೆ ದೊಡ್ಡ ಕನಸು ಹೊಂದಿದ್ದರು. ಖಾದಿಯ ಜೊತೆಗೆ ಗಾಂಧೀಜಿಯವರ ಆದರ್ಶ ಹಾಗೂ ಸ್ವಾತಂತ್ರ್ಯ ಚಳವಳಿಯ ನೆನಪುಗಳು ಎಲ್ಲ ಕಾಲಕ್ಕೂ ಅಗತ್ಯವಾದ ನೈತಿಕತೆಯನ್ನು ಸೂಚಿಸುವಂತಿವೆ ಎಂದು ಹೇಳಿದ್ದಾರೆ.

1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವು ನಾಳೆಯಿಂದ ಎರಡು ದಿನ ಬೆಳಗಾವಿಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸಬೇಕು ಎಂಬ ಆದೇಶ ಹೊರಡಿಸಿದರೆ ಸೂಕ್ತವಾಗಿರುತ್ತದೆ ಎಂದು ತಿಳಿಸಿದ್ದು, ಬಿಗ್ ಟಿವಿಗೆ ಸಿಕ್ಕ ಫಲಶೃತಿಯಾಗಿದೆ.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *