ಕೊಪ್ಪಳ: ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರು ತಿಳಿಸಿದ್ದಾರೆ.
ಸಮಿತಿಯ ಮುಖಂಡರಾದ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಹನುಮೇಶ ಕಡೆಮನಿ, ಟಿ.ರತ್ನಾಕರ, ಈಶಪ್ಪ ಶಿರೂರು ಹಾಗೂ ಕೆ.ಎಸ್. ಮೈಲಾರಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಂಸತ್ತಿನ ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ ಅಮಿತ್ ಶಾ ಅವಮಾನ ಮಾಡಿದ್ದಾರೆ. ಅವರನ್ನು ಸಂಪುಟದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಕೊಪ್ಪಳ ಬಂದ್ ಗೆ ಅಹಿಂದ, ಅಲ್ಪ ಸಂಖ್ಯಾತರ ಸಂಘಟನೆಗಳು ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟು ಬಂದ್ ಆಗಲಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

