Breaking News

ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ: ಇಂಧನ ಸಚಿವ ಕೆ.ಜೆ.ಜಾರ್ಜ್

ಶಿರಾ: ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿ ಜಿಲ್ಲೆಯ, ಪ್ರತಿ ತಾಲೂಕಿನಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆ ಅಲ್ಲಿ ಸೋಲಾರ್‌ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಅವರು ಸೋಮವಾರ ತಾಲೂಕಿನ ಚಂಗಾವರ ಮತ್ತು ಚಿಕ್ಕಬಾಣಗೆರೆ ಗ್ರಾಮದ ಬಳಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ಸೋಲಾರ್‌ ಪಾರ್ಕ್ ವೀಕ್ಷಣೆ ಮಾಡಿ ರೈತರು ಮತ್ತು ಅಧಿಕಾರಿಗಳ ಜೊತೆ ಸಂವಾದ ನಡೆಸಿ ಮಾತನಾಡಿದರು.
ಸೋಲಾರ್‌ ಪಾರ್ಕ್ ನಿರ್ಮಾಣದಿಂದ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದ್ದು, ಇದರಿಂದ ಕೃಷಿ ಉತ್ಪಾದಕತೆ ಮತ್ತು ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಪಿಎಂ ಕುಸುಮ್ ಯೋಜನೆ ರೈತರ ಹಸಿರು ಭವಿಷ್ಯಕ್ಕಾಗಿ ಬದ್ಧತೆಯನ್ನು ಇಟ್ಟುಕೊಂಡಿವೆ. ರೈತರಿಗೆ ನಿರಂತರ ವಿದ್ಯುತ್ ದೊರಕುತ್ತದೆ. ಹಾಗೂ ನವೀಕರಿಸಬಹುದಾದ ಇಂಧನ ಪ್ರಮಾಣದಲ್ಲಿ ಅತ್ಯಗತ್ಯ ಹೆಜ್ಜೆ ಪಿಎಂ ಕುಸುಮ್ ಯೋಜನೆ ಇಟ್ಟಿದೆ. ಈ ವಿದ್ಯುತ್ ಸ್ಥಾವರಗಳಿಂದ ಉತ್ಪತ್ತಿಯಾಗುವ ವಿದ್ಯುತ್ತನ್ನು ತಾಲೂಕಿನ 2299 ಕೃಷಿ ಪಂಪ್ ಸೆಟ್ ಗಳಿಗೆ ನೀಡಲಾಗುವುದು. ಆಗ ಸಾಂಪ್ರದಾಯಿಕ ವಿದ್ಯುತ್ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಇಂತಹ ಯೋಜನೆಗಳು ರೈತರನ್ನು ಸಬಲಗೊಳಿಸುತ್ತವೆ ಎಂದರು.
10 ಸಾವಿರ ಎಕರೆಯಲ್ಲಿ ಪಾವಗಡದಲ್ಲಿ ಮತ್ತೊಂದು ಸೋಲಾರ್ ಪಾರ್ಕ್ ಈಗಾಗಲೇ ಪಾವಗಡದಲ್ಲಿ ಸೋಲಾರ್‌ ಪಾರ್ಕ್ ನಿರ್ಮಾಣ ಮಾಡಿ ಯಶಸ್ವಿಯಾಗಿದ್ದು, ಈಗಿರುವ ಸೋಲಾರ್‌ ಪಾರ್ಕ್ ಜೊತೆಗೆ ಹೊಸದಾಗಿ 10 ಸಾವಿರ ಎಕರೆಯಲ್ಲಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ. ಯೋಜನೆಯು ಕೇಂದ್ರ ಮತ್ತು ರಾಜ್ಯದ ಸಹಭಾಗಿತ್ವದಲ್ಲಿ ನಡೆಯಲಿದ್ದು ರಾಜ್ಯ ಶರ್ಕಾರ ಶೇ. 50, ಕೇಂದ್ರ ಸರಕಾರಿ ಶೇ. 30 ರಷ್ಟು ಸಹಾಯಧನ ನೀಡುತ್ತದೆ. ರೈತರು ಈ ರೀತಿಯ ಘಟಕ ಸ್ಥಾಪಿಸಿದರೆ ಅವರು ಉಪಯೋಗಿಸಿಕೊಂಡು ಹೆಚ್ಚಾದ ವಿದ್ಯುತ್ ಅನ್ನು ಸರ್ಕಾರ ಯುನಿಟ್ಟಿಗೆ ರೂ. 3.17 ರೂಗಳಿಗೆ ಕೊಂಡುಕೊಳ್ಳಲಾಗುವುದು ಎಂದರು.
ಸೋಲಾರ್‌ಪಾರ್ಕ್‌ಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡುವಗುರಿಹೊಂದಲಾಗಿದೆ. ಈ ಯೋಜನೆಯಲ್ಲಿ ಅಕ್ರಮ ಸಕ್ರಮದ ಪಂಪ್ ಸೆಟ್ ಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಸುಮಾರು 4.50 ಲಕ್ಷ ಪಂಪ್ ಸೆಟ್ ಗಳಿಗೆ ಅಕ್ರಮ ಸಕ್ರಮದಲ್ಲಿ ಸಕ್ರಮ ಮಾಡಲಾಗಿದೆ. ತುಮಕೂರು ಜಿಲ್ಲೆಯಲ್ಲಿ 27 ಕಡೆಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.
ಶಿರಾ ಕ್ಷೇತ್ರದ ಶಾಸಕರು ಟಿ.ಬಿ.ಜಯಚಂದ್ರ ಅವರು ನನಗಿಂತಲೂ ಹಿರಿಯ ಶಾಸಕರಿದ್ದಾರೆ. ಅವರು ಕ್ರಿಯಾಶೀಲ ಜನಪ್ರತಿನಿಧಿಗಳು ಇವರಿಗೆ ಸಚಿವ ನೀಡಬೇಕೆಂಬುದು ನನ್ನ ಅನಿಸಿಕೆಯಾಗಿದೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದನ್ನು ಮುಖ್ಯಮಂತ್ರಿಗಳು, ಹೈಕಮಾಂಡ್ ಬಿಟ್ಟ ವಿಚಾರವಾಗಿದೆ ಎಂದರು. ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ ರಾಜ್ಯಾದ್ಯಂತ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಸರ್ಕಾರ ರಾಜ್ಯಾದ್ಯಂತ ಸೋಲಾರ್ ಪಾರ್ಕ್ ನಿರ್ಮಾಣದ ಯೋಜನೆ ಹಾಕಿಕೊಂಡಿದೆ.
ಇದನ್ನು ಶಿರಾದಿಂದ ಪ್ರಾರಂಭಿಕವಾಗಿ ಅನುಷ್ಠಾನಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಶಿರಾ ತಾಲೂಕಿನಲ್ಲಿ ಸದ್ಯ ಚಂಗಾವರ ಮತ್ತು ಚಿಕ್ಕಬಾಣಗೆರೆಯಲ್ಲಿ ಸೋಲಾರ್‌ಪಾರ್ಕ್ ನಿರ್ಮಾಣ ಮಾಡಿದ್ದು, ಇನ್ನೂ ಜಾಗ ಇದೆ. ಹೆಚ್ಚುವರಿಯಾಗಿ ಸೋಲಾರ್‌ಪಾರ್ಕ್ ಮಾಡಲಾಗುವುದು. ಇದರಿಂದ ರೈತರಿಗೆ 7 ರಿಂದ ಗಂಟೆ ನಿರಂತರ ವಿದ್ಯುತ್ ದೊರಕುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜೀಶಾನ್ ಮೊಹಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ, ಸ್ಥಾಯಿ ಸಮಿತಿ ಅಧ್ಯಕ್ಷಶಿವಶಂಕರ್, ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ನಗರಸಭೆ ಮಾಜಿ ಅಧ್ಯಕ್ಷ ಅಮಾನುಲ್ಲಾ ಖಾನ್, ಸದಸ್ಯರಾದ ಅಜಯ್ ಕುಮಾರ್, ಮಹಮ್ಮದ್ ಜಾಫರ್, ಅಜಯ್ ಕುಮಾರ್, ಫಯಾಜ್ ಖಾನ್, ನೂರುದ್ದೀನ್, ಬೆಸ್ಕಾಂ ಎಇಇ ಶಾಂತರಾಜು, ಬೆಸ್ಕಾಂ ಎಸ್‌ಓ ಮುರಳಿದರ, ಹನುಮಂತರಾಯ, ಚಂಗಾವರ ಮತ್ತು ಚಿಕ್ಕಬಾಣಗೆರೆ ಗ್ರಾಮಗಳ ರೈತರಾದ ಸಿದ್ದಪ್ಪ, ದೊಡ್ಡಬಾಣಗೆರೆ ರಂಗನಾಥಪ್ಪ, ಸೋಮಣ್ಣ, ಕುರುಬ ರಾಮನಹಳ್ಳಿ ಕರಿಯಣ್ಣ ಸೇರಿದಂತೆ ರಾಮ್ ತರಂಗ ಸಲ್ಯೂಷನ್ ಲಿಮಿಟೆಡ್ ನ ಅಧಿಕಾರಿಗಳು, ಬೆಸ್ಕಾಂ ಸಿಬ್ಬಂದಿ ಸೇರಿದಂತೆ ಹಲವರು ಹಾಜರಿದ್ದರು.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *