Breaking News

ಹುಬ್ಬಳ್ಳಿಯ ಸಿಲಿಂಡರ್ ಸ್ಫೋಟ ಪ್ರಕರಣ: ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ಮಾಲಾಧಾರಿ ವಿನಾಯಕ್ ಬಾರಕೇರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರ್ಘಟನೆಯಲ್ಲಿ ಈವರೆಗೆ 8 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಒಬ್ಬ ಮಾಲಾಧಾರಿ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಮಾಲಾಧಾರಿ ವಿನಾಯಕ್ ಬಾರಕೇರ ಬಹುತೇಕ ಚೇತರಿಸಿಕೊಂಡಿದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ.
12 ವರ್ಷದ ವಿನಾಯಕ್ ಆರೋಗ್ಯದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಡಿಸ್ಚಾರ್ಜ್​ ಮಾಡಲಾಗುವುದು ಎಂದು ಕಿಮ್ಸ್ ನಿರ್ದೇಶಕ ಡಾ. ಎಸ್​ಎಫ್ ಕಮ್ಮಾರ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 22 ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಯಲ್ಲಿ ಸಿಲಿಂಡರ್ ಸ್ಪೋಟವಾಗಿತ್ತು. ಘಟನೆಯಲ್ಲಿ 9 ಜನ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. 9 ಜನರ ಪೈಕಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಲಿಂಗರಾಜ ಬೀರನೂರ, ಮಂಜು ವಾಗ್ಮೋಡೆ, ರಾಜು ಮೂಗೇರಿ, ತೇಜಸ್ವರ್ ಸುತಾರೆ, ಶಂಕರ್ ಊರ್ಬಿ, ಪ್ರಕಾಶ್ ಬಾರಕೇರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
12 ವರ್ಷ ವಯಸ್ಸಿನ ವಿನಾಯಕ್ ಬಾರಕೇರ ಮಾತ್ರ ಗುಣಮುಖನಾಗಿದ್ದು, ಈತನ ತಂದೆ ಪ್ರಕಾಶ್ ಬಾರಕೇರ ಮಂಗಳವಾರ ನಸುಕಿನಲ್ಲಿ ಕೊನೆಯುಸಿರೆಳೆದಿದ್ದರು. ವಿನಾಯಕ್​ಗೆ ಶೇಕಡಾ 25 ರಷ್ಟು ಸುಟ್ಟ ಗಾಯಗಳಾಗಿದ್ದವು.
ಸಿಲಿಂಡರ್ ಸ್ಫೋಟ ಸಂಭವಿಸಿದಾಗ ಮೊದಲು ಮಗನನ್ನು ಕರೆದುಕೊಂಡು ಹೊರಗೇ ಬಂದಿದ್ದೇ ಪ್ರಕಾಶ್ ಬಾರಕೇರ ಆಗಿದ್ದರು. ಸುಟ್ಡ ಗಾಯಗಳಿಂದ ನರಳಾಡುತ್ತಿದ್ದರೂ ಮಗನನ್ನು ಕಾಪಾಡಲು ಓಡೋಡಿ ಬಂದಿದ್ದರು.
ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ, ಮಂಗಳವಾರ ಬೆಳಗ್ಗೆ ಪ್ರಕಾಶ್ ಬಾರಕೇರ ಕೂಡ ಸಾವನ್ನಪ್ಪಿದ್ದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *