Breaking News

ವಿಜಯಪುರ-ಮಂಗಳೂರು ಎಕ್ಸ್ ಪ್ರೆಸ್ ರೈಲು ಯಲವಿಗಿಯಲ್ಲಿ ನಿಲುಗಡೆಗೆ ಅವಕಾಶ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬಸವರಾಜ ಬೊಮ್ಮಾಯಿ ರೈಲ್ವೆ ಇಲಾಖೆಗೆ ಧನ್ಯವಾದವನ್ನು ತಿಳಿಸಿದ್ದಾರೆ. ವಿಜಯಪುರ ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ ಹಾಗೂ ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ‌.
ನನ್ನ ಕೋರಿಕೆಗೆ ಸ್ಪಂದಿಸಿ ಯಲಿವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು. ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ – ಮಂಗಳೂರು ಎಕ್ಸ್ ಪ್ರೆಸ್ ರೈಲು ಪ್ರತಿದಿನ ರಾತ್ರಿ 9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *