Breaking News

ದೆಹಲಿಯಲ್ಲೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್ ಪಕ್ಷ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷವು ಇದೀಗ ದೆಹಲಿಯಲ್ಲೂ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್, ‘ಪ್ಯಾರಿ ದೀದಿ’ ಯೋಜನೆಗೆ ಚಾಲನೆ ನೀಡಲು ಬಂದಿದ್ದೇನೆ, ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಮಹಿಳೆಯರಿಗೆ 2,500 ರೂಪಾಯಿ ನೀಡುತ್ತೇವೆ ಎಂಬ ವಿಶ್ವಾಸವಿದೆ ಮತ್ತು ಅದನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿ ಜಾರಿಗೆ ತಂದಿದ್ದೇವೆ. ಅದೇ ಮಾದರಿಯಲ್ಲಿ ದೆಹಲಿಯಲ್ಲೂ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *