ಬೆಂಗಳೂರು : ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನವರನ್ನು ಸಂಸದ ಯದುವೀರ್ ಕೃಷ್ಣ ಚಾಮರಾಜ ಒಡೆಯರ್ ಅವರು ಭೇಟಿಯಾಗಿದ್ದು, ಹೂಗುಚ್ಛ ನೀಡಿ ಗೌರವಿಸಲಾಯಿತು.
ಈ ವೇಳೆ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.
ಬಳಿಕ ಮೈಸೂರು ಹಾಗೂ ಕೊಡಗು ಅಭಿವೃದ್ದಿಯ ಬಗ್ಗೆ ಕೆಲ ಕಾಲ ಮಾತನಾಡಿದ್ದಾರೆ. ಕಳೆದ ಎರಡ್ಮೂರು ದಿನಗಳ ಹಿಂದೆಯಷ್ಟೆ ನಿಮಾನ್ಸ್ ಆಸ್ಪತ್ರೆಯ ಮಹೋತ್ಸವದಂದು ಬಿಜೆಪಿ ಕೆಲ ನಾಯಕರು ಹಾಗೂ ಕಾಂಗ್ರೆಸ್ ನ ನಾಯಕರು ಒಟ್ಟಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

