ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ‘ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇಂದು ಬೆಳಗ್ಗೆ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌಡಗೆರೆ ಮತ್ತು ಅದ್ದೆಗೊಪ್ಪ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮ ಸಂದರ್ಭದಲ್ಲಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

