Breaking News

ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಯಿಂದ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ ತಾಂತ್ರಿಕ ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನುಶಿಶಿಕ್ಷು ತರಬೇತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಜ.5 ರಿಂದ ಜ.20 ವರೆಗೆ ಅರ್ಜಿ ಸಲ್ಲಿಸಬಹುದು.
ಐಟಿಐ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್( ಡಿಸೇಲ್), ವೆಲ್ಡರ್, ಕೋಪಾ(ಪಾಸಾ)/ ಐಟಿಐ ನಲ್ಲಿ ತೇರ್ಗಡೆ ಹೊಂದಿರುವ ಡಿಟಿಪಿಓ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹತೆ ಹೊಂದಿದ್ದಾರೆ. ಮೆಕಾನಿಕಲ್ ಡಿಸೇಲ್-20, ಫಿಟ್ಟರ್-10, ವೆಲ್ಡರ್-10, ಎಲೆಕ್ಟಿçಷಿಯನ್-20, ಕೋಪಾ/ಡಿಡಿಪಿಓ-10 ಶಿಶಿಕ್ಷ ಹುದ್ದೆ ಖಾಲಿ ಇವೆ, ಹಾಗೂ ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಸಹ ಒಂದು ವರ್ಷ ತರಬೇತಿಯನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮ್ಮ ದಾಖಲಾತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸಲ್ಲಿಸಬಹುದಾಗಿದ್ದು, ಕಚೇರಿಯು ಭಾನುವಾರ ಮತ್ತು ಸಾರ್ವತ್ರಿಕ ರಜೆ ಹೊರತುಪಡಿಸಿ ಬೆಳಿಗ್ಗೆ 11 ರಿಂದ ಸಾಯಕಾಲ 5 ಗಂಟೆಗೆ ವರೆಗೂ ಹಾಗೂ ಶನಿವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೂ ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮ ಸಂಬಂಧಪಟ್ಟ ಅಧಿಕಾ / ಘಟಕ ವ್ಯವಸ್ಥಾಪಕರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *