ನವದೆಹಲಿ: ರಸ್ತೆ ನಿರ್ಮಾಣವನ್ನು ದೋಷಯುಕ್ತವಾಗಿ ಮಾಡಿದರೆ ಅದನ್ನು ಜಾಮೀನುರಹಿತ ಅಪರಾಧ ಎಂದು ಪರಿಗಣಿಸಬೇಕು. ಅಲ್ಲದೆ ಆ ರಸ್ತೆಯಲ್ಲಾಗುವ ಅಪರಾಧಗಳಿಗೆ ರಸ್ತೆ ನಿರ್ಮಿಸಿದ ಗುತ್ತಿಗೆದಾರರು ಹಾಗೂ ಎಂಜಿನಿಯರ್ಗಳೇ ಜವಾಬ್ದಾರಿ ಎಂದು ಪರಿಗಣಿಸಿ ಅವರಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ರಸ್ತೆ ಅಪಘಾತಗಳಲ್ಲಿ ಭಾರತವು ಮೊದಲ ಸ್ಥಾನದಲ್ಲಿದೆ. 2030ರ ವೇಳೆಗೆ ಈ ಸಾವು-ನೋವುಗಳನ್ನು ಅರ್ಧದಷ್ಟು ಕಡಿಮೆಗೊಳಿಸುವ ಗುರಿಯನ್ನು ಹೆದ್ದಾರಿ ಸಚಿವಾಲಯವು ಹೊಂದಿದೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

