ಹುಬ್ಬಳ್ಳಿ: ಹುಬ್ಬಳ್ಳಿಯಲ್ಲೊಂದು ಘನಘೋರ ಘಟನೆ ನಡೆದಿದ್ದು, ವಿವಾಹಿತ ಮಹಿಳೆ ಜೊತೆ ಮಾತಾಡಿದ್ದಕ್ಕೆ ಬೆತ್ತಲೆ ಮಾಡಿ ಹಲ್ಲೆ ಮಾಡಿದ ಘಟನೆ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು, ನಿನ್ನೆ ಮಹಿಳೆ ಜೊತೆ ಫೋನ್ ನಲ್ಲಿ ಮಾತಾಡಿದ್ದ ಮುಜಾಫಿರ್ ನನ್ನು ಅಪಹರಣ ಮಾಡಿ ಬೆತ್ತಲೆಗೊಳಿಸಿ ಮಹಿಳೆಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಸಿಕ್ಕ ಸಿಕ್ಕಲ್ಲಿ ಬ್ಲೇಡ್ ಹಾಕಿದ್ದಾರೆ. ಗಂಭೀರವಾಗಿ ಗಾಯಗೊಂಡ ಮುಜಾಫೀರ್ ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹತ್ತು ಹದಿನೈದು ಜನರಿಂದ ಹಲ್ಲೆ ಆರೋಪ ಕೇಳಿ ಬಂದಿದ್ದು ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ನಡೆಸಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

