ಮೈಸೂರು: ಮೈಕ್ರೋಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ. ಯಾವ ರೀತಿ ಅವರ ಮೇಲೆ ಕಡಿವಾಣ ಹಾಕಿದ್ದೀರಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಮಸ್ಯೆ ಇದೆ.
ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ ಕಿರುಕುಳ ಕೊಡುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

