ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಮಾಹಿತಿಯಿಲ್ಲ.
ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

