ಹುಬ್ಬಳ್ಳಿ: ಬಿಜೆಪಿಯಲ್ಲಿ ಗದ್ದಲ ಇರೋದು ಸತ್ಯ, ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಎರಡೂ ಬಣಗಳ ನಡುವೆ ನಡೆದಿರೋ ಭಿನ್ನಮತ ಹೈಕಮಾಂಡ್ ಗಮನಕ್ಕಿದೆ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ದೊಡ್ಡ ಪಕ್ಷ ಆಗಿರೋದ್ರಿಂದ ಬಿಜೆಪಿಯಲ್ಲಿ ಒಂದಷ್ಟು ಭಿನ್ನಾಭಿಪ್ರಾಯ ಸಹಜ, ಎಲ್ಲ ಮುಖಂಡರನ್ನು ಕರೆದು ಮಾತನಾಡಿದ್ದಾರೆ. ಒಂದು ವಾರದಲ್ಲಿ ಎಲ್ಲ ಭಿನ್ನಾಭಿಪ್ರಾಯಕ್ಕೂ ತೆರೆ ಬೀಳುತ್ತೆ ಬಿಜೆಪಿ ರಾಜ್ಯಾಧ್ಯಕ್ಷರ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧಾರಿಸುತ್ತೆ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

