Breaking News

ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ಧರಾಮಯ್ಯ

ಮೈಸೂರು: ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು.
ಇಡ್ಲಿ, ಮಸಾಲೆ ದೋಸೆ ಸವಿದ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯ ಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಜೊತೆಯಲ್ಲಿದ್ದು ಉಪಹಾರ ಸೇವಿಸಿದರು.
ಮುಖ್ಯಮಂತ್ರಿ ಉಪಹಾರಕ್ಕೆ ಆಗಮಿಸಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಕಿಕ್ಕಿರಿದು ತುಂಬಿ ಸಿದ್ದರಾಮಯ್ಯರನ್ನು ಕಣ್ತುಂಬಿಕೊಂಡರು.ಇನ್ನು ಕೆಲವರು ದೂರದಿಂದಲೇ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಬಳಿಕ ತಮ್ಮ ನಿವಾಸದ ಬಳಿ ಮುಖ್ಯಮಂತ್ರಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಇದೇ ವೇಳೆ ಮೈಸೂರಿನ ತಮ್ಮ ಸ್ನೇಹಿತ ಹಾಗೂ ಹಿರಿಯ ವಕೀಲ ಶ್ರೀನಿವಾಸನ್ ಅವರ ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *