Breaking News

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ

ಬೆಂಗಳೂರು : ಅಂಗನವಾಡಿ ನೌಕರರು ಪ್ರತಿಭಟನೆ ಕೈ ಬಿಟ್ಟ ಒಂದೆರೆಡು ದಿನದಲ್ಲಿ ಸರ್ಕಾರಕ್ಕೆ ದೊಡ್ಡ ತಲೆಬಿಸಿ ಶುರುವಾಗಿದೆ. ಇವತ್ತಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ಆರಂಭವಾಗಿದೆ.
ಇಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ಆಗಮಿಸುವ ಆಶಾ ಕಾರ್ಯಕರ್ತೆಯರು , ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ .
ಕೈ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿತ್ತು.ಆದ್ರೆ ಈ ವರೆಗೂ ಆದ್ಯತೆ ಕೊಡದ ಹಿನ್ನೆಲೆ ಪ್ರತಿಭಟನೆ ತೀವ್ರ ಗೊಳಿಸಲಾಗುತ್ತಿದೆ. ಮಾಸಿಕ ಗೌರವಧನವನ್ನು 15 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದಾರೆ. ಇದಲ್ಲದೆ ಗುಣಮಟ್ಟದ ಟ್ಯಾಬ್ , ಅಗತ್ಯ ಭತ್ಯೆ ನೀಡುವಂತೆಯೂ ಬೇಡಿಕೆ ಸಲ್ಲಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ದಿನನಿತ್ಯವೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಹಾಗೇಯೇ, ತಮಗೆ ನ್ಯಾಯ ಸಿಗುವವರೆಗೂ ಫ್ರೀಡಂ ಪಾರ್ಕ್ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟನ್ನು ಹಿಡಿದಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *