Breaking News

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ: ನಿರ್ಮಲಾ ಸೀತಾರಾಮನ್ ಭೇಟಿಯಾದ ರಾಜ್ಯದ ಕಾಂಗ್ರೆಸ್ ಸಂಸದರು

ನವದೆಹಲಿ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಆಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆಯನ್ನು ರಾಜ್ಯದ ಕಾಂಗ್ರೆಸ್ ಸಂಸದರು ಭೇಟಿಯಾಗಿದ್ದಾರೆ.
ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಂಸದರು,ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ, ಕೊಡುಗೆಯನ್ನ ನೀಡಿಲ್ಲವೆಂಬುದನ್ನ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಈ ಹಿಂದೆ ರಾಜ್ಯಕ್ಕೆ ನಿಗದಿಯಾದ ನಬಾರ್ಡ್ ರೀ ಫೈನಾನ್ಸ್ ನ್ನು ಕಡಿಮೆಗೊಳಿಸಿದ ಕುರಿತು ಹಾಗೂ ಎಲ್‌ಐಸಿ ಪ್ರತಿನಿಧಿಗಳ ಬೇಡಿಕೆಗಳ ಕುರಿತು ಕಾಂಗ್ರೆಸ್ ಸಂಸದರು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಗಮನಸೆಳೆದಿದ್ದಾರೆ.
ಈ ವೇಳೆ, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಸಂಸದರು ಆಗ್ರಹಿಸಿದ್ದು, ಸಂಸದ ಜಿ.ಕುಮಾರ ನಾಯಕ್, ರಾಜಶೇಖರ್ ಹಿಟ್ನಾಳ್, ಸಾಗರ್ ಖಂಡ್ರೆ, ಶ್ರೇಯಸ್ ಪಟೇಲ್, ಸುನೀಲ್ ಬೋಸ್, ಡಾ. ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

Share News

About BigTv News

Check Also

ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಆನ್ಲೈನ್ ಬೆಟ್ಟಿಂಗ್ ಗೆ ಒಂದೇ ಕುಟುಂಬದ ಮೂವರು ಬಲಿ!….

ಮೈಸೂರಿನಲ್ಲಿ ನಿನ್ನೆ ತಾನೆ ಉದ್ಯಮಿಯೊಬ್ಬ ತನ್ನ ಪತ್ನಿ ಮಗ ಹಾಗೂ ತಾಯಿಯನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ …

Leave a Reply

Your email address will not be published. Required fields are marked *

You cannot copy content of this page