ಬೆಂಗಳೂರಿನಲ್ಲಿ ಇಡ್ಲಿ ತಯಾರಿಕೆ ಹಂತದಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ಗಳನ್ನು ಬಳಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಿಸಿಯಲ್ಲಿ ಬೇಯಿಸಿದಾಗ ಅದರಲ್ಲಿರುವ ವಿಷಕಾರಿ ಅಂಶಗಳು ಆಹಾರದಲ್ಲಿ ಬೆರಿಕೆಯಾಗುವ ಸಾಧ್ಯತೆ ಇದೆ. ಈ ರಾಸಾಯನಿಕಗಳು ಕ್ಯಾನ್ಸರ್ ಸೇರಿದಂತೆ ಗಂಭೀರ ರೋಗಗಳಿಗೆ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಹೋಟೆಲ್ಗಳಲ್ಲಿ ಇಡ್ಲಿ ಮಾರಾಟದಲ್ಲಿ ಇಳಿಕೆ ಕಂಡುಬಂದಿದೆ. ಗ್ರಾಹಕರು ಇಡ್ಲಿ ಸೇವಿಸಲು ಭಯಪಾಡುತ್ತಿದ್ದಾರೆ.ಇಡ್ಲಿಯಷ್ಟೇ ಅಲ್ಲದೆ, ಪೇಸ್ಟ್ರೀಸ್, ಕೇಕ್,ಗೋಬಿ ಮತ್ತು ಮಸಾಲಾ ಪುರಿಯಂತಹ ಆಹಾರ ಪದಾರ್ಥಗಳ ಮಾರಾಟದಲ್ಲೂ ಇಳಿಕೆ ಕಂಡುಬಂದಿದೆ.ಈ ಘಟನೆಗಳಿಂದಾಗಿ ಜನಸಾಮಾನ್ಯರು ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಜಾಗೃತ ವಹಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

