ನವಲಗುಂದ ತಾಲೂಕು ಯಮನೂರು ಚಾಂಗದೇವರು ಉರ್ಫ ರಾಜಾ ಬಾಗಸವಾರ ದೇವರ ಜಾತ್ರೆಗೆ ಬರುವ ಭಕ್ತಾದಿಗಳು ಹಾಗೂ ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.ಮಾರ್ಚ್ 17 ರಿಂದ 21 ರವರೆಗೆ ಜಾತ್ರೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ, ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣ ಅಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ವಿಶೇಷ ಬಸ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.ಭಕ್ತ ಸಮುದಾಯಕ್ಕೆ ಸಾಕಷ್ಟು ಅನುಕೂಲ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

