Breaking News

ಮಕ್ಕಳನ್ನ ನಂಬಿ ಸಾಲ‌ ಕೊಡಿಸಿದ್ದ ವೃದ್ದ ದಂಪತಿ‌ ಬೀದಿಗೆ

ವಿಜಯಪುರ ನಗರದ ಆಲಕುಂಟೆ ನಗರದ ವೀರಭದ್ರ ಹಾಗೂ ಬಾಗಮ್ಮ ಹಡಪದ ದಂಪತಿಗೆ ಇಳಿವಯಸ್ಸಿನಲ್ಲಿ ಮಕ್ಕಳೇ ವಿಲನ್ ಆಗಿದ್ಧಾರೆ.5 ವರ್ಷದ ಹಿಂದೆ ಬಸವರಾಜಗೆ ಹೇರ್ ಕಟಿಂಗ್ ಸಲೂನ್ ಹಾಕಲು ಜೀವನಕ್ಕೆ ಆಸರೆಯಾಗಿದ್ದ ಮನೆಯ ಮೇಲೆ ನಗರದ ಜನ ಸ್ಮಾಲ್ ಫೈನಾನ್ಸ್ ನಲ್ಲಿ 5 ಲಕ್ಷ ಸಾಲ ಪಡೆದುಕೊಟ್ಟಿದ್ದರು. ಈ ಹಣ ಪಡೆದ ಬಸವರಾಜ ಸಲೂಲ್ ಶಾಪ್ ಹಾಕಿದ್ದ. ನಂತರ ಸಾಲದ ಕಂತು ಕಟ್ಟದೇ ತಂದೆ-ತಾಯಿ ಬಿಟ್ಟು ಬೇರೆಯಾಗಿದ್ದಾನೆ. ಇನ್ನು ಕಿರಿಯ ಮಗನೂ ಸಹ ತಂದೆ ತಾಯಿಯನ್ನು ಬಿಟ್ಟು ಬೇರೆ ಮನೆ ಮಾಡಿಕೊಂಡಿದ್ದಾನೆ.ಈ ಬಗ್ಗೆ ಜಿಲ್ಲಾಡಳಿತ ವೃದ್ಧ ದಂಪತಿಯ ನೆರವಿಗೆ ಧಾವಿಸಿ ಇದಕ್ಕೊಂದು ಪರಿಹಾರ ಹುಡುಕಿಕೊಡಬೇಕಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *