ಗ್ರಾಮ ಪಂಚಾಯಿತಿ ಸದಸ್ಯನ ಮನೆಗೆ ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ನಾಲ್ಕು ಮಂದಿ ಪ್ರಾಣ ಅಪಾಯದಿಂದ ಪಾರಾಗಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.ಮನೆಯಲ್ಲಿ ಗಾಢ ನಿದ್ದೆಗೆ ಜಾರಿದ್ದ ಸಮಯದಲ್ಲಿ ಜಗನ್ನಾಥ ಹಾಗೂ ಪತ್ನಿ ಅವರ ಇಬ್ಬರು ಮಕ್ಕಳು ಅಗ್ನಿ ದುರಂತದಿಂದ ಪಾರಾಗಿದ್ದಾರೆ. ಸೋಮವಾರ ಮಧ್ಯರಾತ್ರಿ 1.30 ರ ಸಮಯದಲ್ಲಿ ಕಿಡಿಗೇಡಿಗಳು ಸುಮಾರು 60 ಲೀಟರ್ ಪೆಟ್ರೋಲ್ ತಂದು ಇದರಲ್ಲಿ 50 ಲೀಟರ್ ಪೆಟ್ರೋಲ್ ಮನೆಯ ಕಿಟಕಿಯ ಮೂಲಕ ಸುರಿದು ಬೆಂಕಿ ಹಚ್ಚಿ 10 ಲೀಟರ್ ನ ಒಂದು ಕ್ಯಾನ್ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅವಲಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

