ವಿಶ್ವ ಜಲ ದಿನದ ಅಂಗವಾಗಿ “ಜಲವೇ ಜೀವನ” ಅಭಿಯಾನದ ಅಡಿಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 21 ಶುಕ್ರವಾರ ಸಂಜೆ 6:00ಗೆ ಸ್ಯಾಂಕಿ ಕೆರೆಯಲ್ಲಿ ಪವಿತ್ರ ಕಾವೇರಿ ಆರತಿ ಕಾರ್ಯಕ್ರಮ ಜರುಗಲಿದೆ. ಈ ಜಲವೇ ಜೀವನ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಜಲ ಸಂರಕ್ಷಣೆಯ ಪ್ರತಿಜ್ಞೆ ಮಾಡಿಸುವ ಮೂಲಕ BWSSB ಗಿನ್ನಿಸ್ ವಿಶ್ವ ದಾಖಲೆ ರೂಪಿಸಲು ಸಜ್ಜಾಗಿದೆ. ಅತಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಲ ಸಂರಕ್ಷಣೆಯ ಪ್ರತಿಜ್ಞೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

