Breaking News

ಗೂಢಚಾರಿಕೆ ಮಾಡುತ್ತಿದ್ದ ಪಾಕಿಸ್ತಾನ್ ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ಆರೆಸ್ಟ್‌.!

ಭಾರತ್​ ಎಲೆಕ್ರ್ಟಾನಿಕ್ಸ್​ ಲಿಮಿಟೆಡ್​​ನಲ್ಲಿ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದೀಪರಾಜ್ ಚಂದ್ರನ್​ ಎಂಬ ವ್ಯಕ್ತಿಯೇ ಆರೋಪಿಯಾಗಿದ್ದು, ಕೇಂದ್ರ, ರಾಜ್ಯ ಹಾಗೂ ಗುಪ್ತಚರ ದಳಗಳು ಜಂಟಿ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಿದೆ.ಸೇನೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನ ಪಾಕಿಸ್ತಾನಕ್ಕೆ ಬಿಟ್​ ಕಾಯಿನ್ ವಿನಿಮಯದೊಂದಿಗೆ ರವಾನೆ ಮಾಡುತ್ತಿದ್ದ. ಆರೋಪಿ ದೀಪರಾಜ್ ಚಂದ್ರನ್ ಉತ್ತರಪ್ರದೇಶದ ಘಾಜಿಯಾಬಾದ್​ನವನು ಎಂದು ತಿಳಿದು ಬಂದಿದೆ. ತನಿಖೆ ಮಾಡುತ್ತಿರುವ ಅಧಿಕಾರಿಗಳು ಹಲವು ಬೆಚ್ಚಿ ಬೀಳಿಸುವ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ.ಚಂದ್ರನ್​ನ ಜೊತೆ ಇನ್ನು ಯಾರೆಲ್ಲಾ ಆ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದನ್ನು ಕೂಡ ವಿಚಾರಣೆ ಮಾಡುತ್ತಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *