ಏಗನೂರು ಗ್ರಾಮದಲ್ಲಿ ಶನಿವಾರ ಸಂಜೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಪತ್ನಿಯ ತಂಗಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಪದ್ಮಾವತಿ ಹಾಗೂ ರಾಜಮ್ಮ ಇಬ್ಬರನ್ನೂ ರಿಮ್ಸ್ಗೆ ದಾಖಲಿಸಲಾಗಿದ್ದು, ಪದ್ಮವಾತಿ ಜೀವನಮರಣದ ಮಧ್ಯೆ ಹೋರಾಟ ನಡೆಸಿದ್ದಾರೆ.ತಿಮ್ಮಪ್ಪ ಯಾದವ ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೆ ಯತ್ನಿಸಿದ್ದಾನೆ. ಅಕ್ಕನ ಮೇಲೆ ಹಲ್ಲೆ ನಡೆಸಲು ಮುಂದಾದಾಗ ತಂಗಿಯ ಮೇಲೂ ಹಲ್ಲೆ ಮಾಡಿದ್ದಾನೆ. ಪೊಲೀಸರು ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

