ಮದ್ಯಪಾನ ಮಾಡಿ ತನ್ನ ಮಗನಿಗೆ ಆಳವಾದ ಕೃಷಿ ಹೊಂಡದಲ್ಲಿ ಈಜು ಕಲಿಸಲು ಮುಂದಾಗಿದ್ದಾನೆ. ಇದೀಗ ನೀರಿನಲ್ಲಿ ಮುಳುಗಿ ಇಬ್ಬರೂ ಸಾವಿಗೀಡಾಗಿದ್ದಾರೆ. ಈ ಘಟನೆ ಕರ್ನಾಟಕದ ಗಡಿಭಾಗ ತಮಿಳುನಾಡಿನ ಸೂಳಗಿರಿ ಸಮೀಪದ ನಂಜಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುನಿರತ್ನ ಹಾಗೂ ಸಂತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ಈಜು ಕಲಿಸುತ್ತಾ ಕೃಷಿ ಹೊಂಡದ ಆಳದ ಪ್ರದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅಪ್ಪನಿಗೆ ಹೊಂಡದ ತಳಭಾಗದಲ್ಲಿದ್ದ ಕೆಸರು ಕಾಲಿಗೆ ಅಂಟಿದ್ದು, ಮೇಲೆ ಬರಲು ಕಷ್ಟವಾಗಿದೆ. ಆಗ ಮಗನೂ ಕೂಡ ಮುಳುಗಲು ಆರಂಭಿಸಿದ್ದಾನೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

