ತಾವೇ ಕಷ್ಟದ ದಿನಗಳನ್ನು ಎದುರಿಸುತ್ತಿದ್ದರೂ ಕೂಡ ದರ್ಶನ್ ಇತರರಿಗೆ ಸಹಾಯ ಮಾಡುವುದನ್ನು ತಪ್ಪಿಸಿಲ್ಲ.ಕೊಲೆ ಪ್ರಕರಣ, ಜೈಲು, ಜಾಮೀನು ಈ ರೀತಿ ತಾವೇ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ನಟ ದರ್ಶನ್, ಆಶ್ರಮದ ಪಾಲಾಗಿದ್ದ ಹಿರಿಯ ನಟ ಸುದರ್ಶನ್ ಪತ್ನಿ ಶೈಲಶ್ರೀ ಅವರ ನೆರವಿಗೆ ನಿಂತಿದ್ದು, ಯಾರೂ ಇಲ್ಲದೇ ಆಶ್ರಮ ಪಾಲಾಗಿದ್ದ ಅವರ ಖರ್ಚುಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಲಗೈ ಕೊಟ್ಟದ್ದು ಎಡಗೈಗೆ ಗೊತ್ತಾಗಬಾರದು ಎಂಬ ನಿಲುವಿನ ದರ್ಶನ್ ಎಷ್ಟೇ ಗುಪ್ತವಾಗಿ ಈ ದೊಡ್ಡ ಸಹಾಯವನ್ನು ಮಾಡಿದರೂ ಸುದ್ದಿ ಹೊರಬಿದ್ದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

