ಕಳೆದ ಎರಡು ದಿನಗಳ ಹಿಂದೆ ಅನ್ಯಕೋಮಿನ ಯುವಕ ಸಿರಾಜ್ ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದನು. ಯುವಕನ ಟಾರ್ಚರ್ ನಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿದ್ಯಾ ಎಂಬ ಯುವತಿಯು ಧಾರವಾಡ ಜಿಲ್ಲೆಯ ಕುಂದಗೋಳ ನಿವಾಸಿ ಆಗಿರುತ್ತಾಳೆ.ಹುಬ್ಬಳ್ಳಿಯಲ್ಲಿ ಟ್ಯಾಬ್ಲೆಟ್ ತಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾಳನ್ನು ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಯುವತಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಸಿರಾಜ್ ನನ್ನು ಈಗಾಗಲೇ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

