ಕರ್ನಾಟಕ ಸರ್ಕಾರದ ನೀರಾವರಿ ನಿಗಮದಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದ ಇಂದುಮತಿ ಕಾಂಬಳೆ ಅವರು ಬಸ್ನಲ್ಲಿ ಪ್ರಯಾಣ ಮಾಡುವಾಗಲೇ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಸುಮಾರು ಹೊತ್ತು ನಾಡಿಮಿಡಿತವನ್ನು ಹಿಡಿದು ನೋಡಿದ್ದಾರೆ. ಆಗ ಮಹಿಳೆಯ ಜೀವ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದಾದ ನಂತರ ಧಾರವಾಡ ನಗರದ ಜಿಲ್ಲಾ ಆಸ್ಪತ್ರೆಗೆ ಬಸ್ ಅನ್ನು ತಿರುಗಿಸಿದ್ದಾರೆ.ಜಿಲ್ಲಾಸ್ಪತ್ರೆಗೆ ಬರುವ ವೇಳೆಗೆ ಆಕೆ ಸತ್ತಿದ್ದು ದೃಢಪಟ್ಟಿದ್ದು, ವೈದ್ಯರು ಮತ್ತೊಮ್ಮೆ ಪರಿಶೀಲನೆ ಮಾಡಿ ಸಾವಿನ ಬಗ್ಗೆ ಖಚಿತಪಡಿಸಿದ್ದಾರೆ. ಇನ್ನು ಮೃತ ಮಹಿಳೆ ಇಂದುಮತಿ ಕಾಂಬಳೆ (58) ಧಾರವಾಡದ ನೀರಾವರಿ ನಿಗಮದ ಕಚೇರಿಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

