ರಮೇಶ್ ಎಂಬಾತ ಕಳೆದ ಎರಡು ತಿಂಗಳ ಹಿಂದೆ ಸಾಲ ಪಡೆದಿದ್ದ, ಆದರೆ ಪಡೆದ ಲೋನ್ ಗೆ ಸರಿಯಾಗಿ ಇಎಂಐ ಕಟ್ಟದ ಹಿನ್ನಲೆ ಬ್ಯಾಂಕ್ ಸಿಬ್ಬಂದಿ ಚಂದನ್ ಎಂಬುವವರು ಕರೆ ಮಾಡುತ್ತಲೇ ಇದ್ದರೂ, ಆದರೆ ಇದಕ್ಕೆ ರಮೇಶ್ ಚೂರು ಕೂಡ ಕ್ಯಾರೇ ಎನ್ನದೆ ಕರೆ ರಿಸೀವ್ ಮಾಡುತ್ತಿರಲಿಲ್ಲ. ಹಣ ನೀಡಿ ಎಂದು ಚಂದನ್ ಕೇಳಿದಾಗ ರಮೇಶ್ ಅವ್ಯಾಚ್ಯ ಪದದಲ್ಲಿ ನಿಂದಿಸಿದ್ದಾನೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿಗೆ ನಡೆದಿದ್ದು, ಈ ವೇಳೆ ಅಲ್ಲೇ ಪಕ್ಕದಲ್ಲಿದ್ದ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾನೆ. ಕೂಡಲೇ ಸ್ಥಳೀಯರು ಚಂದನ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಂದನ್ ತಲೆಗೆ ಗಂಭೀರ ಗಾಯಗಳಾಗಿವೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

