Breaking News

ಶಿವಮೊಗ್ಗ : ವಿನೋಬನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚಂದ್ರಕಲಾ ಅಮಾನತು

ಈದ್ಗಾ ಮೈದಾನ ವಿವಾದದ ನಂತರ ಎಸ್ಪಿ ಮಿಥುನ್‌ಕುಮಾರ್ ಅವರು ಎಲ್ಲ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಗಳ ಸಭೆ ನಡೆಸಿದ್ದರು. ಸದರಿ ಸಭೆಗೆ ಸಕಾರಣವಿಲ್ಲದೆ ಚಂದ್ರಕಲಾ ಅವರು ಗೈರು ಹಾಜರಾಗಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ನಿರ್ವಹಣೆ ಕುರಿತಂತೆ ಕೆಲ ದೂರುಗಳು ಕೇಳಿಬಂದಿದ್ದವು. ಈ ಕುರಿತಂತೆ ಚಂದ್ರಕಲಾರವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೂರ್ವ ವಲಯ ಐಜಿಪಿಗೆ, ಎಸ್ಪಿ ವರದಿ ಕಳುಹಿಸಿದ್ದರು. ಇದರ ಆಧಾರದ ಮೇಲೆ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಅಧಿಕಾರಿ ಸೋಗಿನಲ್ಲಿ 7 ಲಕ್ಷ ರೂ ವಂಚನೆ!!!

ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರಿಗೆ ಹೂಡಾ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ವಂಚಕರು ಕೂಡ ದಿಂದ ನಗರದಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ಏಳು …

Leave a Reply

Your email address will not be published. Required fields are marked *

You cannot copy content of this page