ಉಚ್ಛಾಟನೆ ಬೆನ್ನಲ್ಲೇ ಮತ್ತಷ್ಟು ಆ್ಯಕ್ಟೀವ್ ಆಗಿರುವ ಯತ್ನಾಳ್ ಎಲ್ಲೆಡೆ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಇಂದು ಉತ್ತರ ಕರ್ನಾಟಕದ ಶಕ್ತಿದೇವಿ ಬೆಳಗಾವಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಗೆ ಯಡಿಯೂರಪ್ಪ ಅವರು ಯಲ್ಲಮ್ಮನ ದರ್ಶನ ಮಾಡಿಸಿದರು. ಯಡಿಯೂರಪ್ಪ ಅಂದ್ರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಲ್ಲ. ದೇವಸ್ಥಾನದ ಅರ್ಚಕ ಯಡಿಯೂರಪ್ಪ ಅವರು ವಿಶೇಷ ಪೂಜೆ ಮಾಡಿ ಯತ್ನಾಳ್ಗೆ ಆಶೀರ್ವಾದ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

