ತಮಿಳುನಾಡು ಮೂಲದ ಶಂಕರ ಎಂಬಾತನನ್ನ ಬಾರ್ ಮುಂದೆ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಜಮೀನು ವಿಚಾರವಾಗಿ ದಾಯಾದಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.ಪ್ರಕರಣ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಟಿಟಿ ಕೃಷ್ಣ ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 5 ಜನ ಆರೋಪಿಗಳು ಪರಾರಿಯಾಗಿದ್ದು, ಉಳಿದ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಲೆ ಆರೋಪ ಸಾಬೀತಾದ ಹಿನ್ನೆಲೆ 12 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

