ಕನಕಮಹಲ್ ಹೆಸರಿನಿಂದ ಕರೆಯಲ್ಪಡುವ ನಿರ್ಮಾಣ ಹಂತದಲ್ಲಿಯೇ ಪಾಳು ಬಿದ್ದಿರುವ ಈ ಕಟ್ಟಡದಲ್ಲಿ ಅಸಹಜವಾಗಿ ಸಾವನಪ್ಪಿದ ಕೊಳೆತ ಶವಗಳು, ಪತ್ತೆಯಾಗಿರುವ ಹಲವಾರು ಘಟನೆಗಳು ನಡೆದಿವೆ. ಅಲ್ಲದೆ ಈ ಸ್ಥಳದಲ್ಲಿ ಅನೈತಿಕ ಚಟುವಟಿಕೆಗಳು, ವೈಶ್ಯವಾಟಿಕೆ ನಡೆಯುತ್ತಿರುವ ಬಗ್ಗೆಯೂ ಸಾರ್ವಜನಿಕ ರಿಂದ ದೂರುಗಳು ಕೇಳಿಬಂದಿವೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.ಕಟ್ಟಡದಿಂದ ಸುಮಾರು 25 ಅಡಿ ಎತ್ತರದಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

