Breaking News

ಬ್ಯಾನರ್ ಹರಿದ ವಿಚಾರಕ್ಕೆ ಗಲಾಟೆ: ಯುವಕನ ಕೊಲೆ!!!

ಮಾಲಾಪುರ ಗ್ರಾಮದ ಶ್ರೀ ಲಕ್ಷ್ಮಿ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸಿದ್ದು, ಇದನ್ನು ಹರಿದು ಹಾಕಿದ ಕಾರಣಕ್ಕೆ ಗಲಾಟೆ ನಡೆದಿದೆ.ಈ ವೇಳೆ ಯುವಕನನ್ನು ಕೊಲೆ ಮಾಡಲಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಶನಿವಾರ ತಡರಾತ್ರಿ ಘಟನೆ ನಡೆದಿದೆ.ಮಾಲಾಪುರ ಜಾತ್ರೆಯಲ್ಲಿ ಬೇರೆ ಊರಿನವರಾದ ಮಂಜುನಾಥ ಬ್ಯಾನರ್ ಹಾಕಿದ್ದನ್ನು ಸಹಿಸದ ಮಾಲಾಪುರದ ಕೆಲ ಯುವಕರು ಬ್ಯಾನರ್ ಹರಿದು ಹಾಕಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಂಜುನಾಥನನ್ನು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಕೇಸು ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *