Breaking News

ಲಕನೋ : ಪತಿಯ ಬರುವಿಕೆಗಾಗಿ ಕಣ್ಣೀರಿನ ಮನವಿ!!

ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಪುಷ್ಪೇಂದ್ರ ಗಂಗ್ವಾರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾರೆ. ಬರೇಲಿಯ ಇಜ್ಜತ್‌ನಗರದ ತ್ರಿಲೋಕ ವಿಹಾರದ ನಿವಾಸಿಯಾಗಿರುವ ಪುಷ್ಪೇಂದ್ರ ಗಂಗ್ವಾರ್ ಕುಟುಂಬಸ್ಥರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪುಷ್ಪೇಂದ್ರ ಪತ್ನಿ, ಜಯಶ್ರೀ ಗಂಗ್ವಾರ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪುಷ್ಪೇಂದ್ರ ಗಂಗ್ವಾರ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಶಿಕ್ಷಕನ ಪತ್ತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಧ್ಯವಿರುವ ಎಲ್ಲಾ ಸ್ಥಳಗಳನ್ನು ಹುಡುಕಲಾಗುತ್ತಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *