Breaking News

ವಿವಾಹಿತ ಶಿಕ್ಷಕಿಯಿಂದ ವಂಚನೆ : ಬೆಂಗಳೂರಿನಲ್ಲಿ ಮನನೊಂದು ಶಿಕ್ಷಕ ಆತ್ಮಹತ್ಯೆ.!

ಶಿಕ್ಷಕ ಆನಂದ ಮತ್ತು ಹೇಮಲತಾ ಕಳೆದ 8 ವರ್ಷದಿಂದ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಬ್ಬರು ಒಟ್ಟುಗೂಡಿ ಮಾಕಳಿಯಲ್ಲಿ ಟ್ಯೂಷಬ್ ಸೆಂಟರ್ ಆರಂಭಿಸಿದ್ದರು. ಆದರೆ ಹೇಮಲತಾ ಇತ್ತೀಚೆಗೆ ಮತ್ತೋರ್ವನ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದರು. ಈ ವಿಷಯ ಇಬ್ಬರ ನಡುವೆ ಬಿರುಕು ಮೂಡಿಸಿತ್ತು. ಆನಂದ ಟ್ಯೂಷನ್ ಸೆಂಟರ ಗೆ ಹಣ ಹಾಕಿದಲ್ಲದೇ ತನ್ನ ಮನೆಯಿಂದ 5 ಲಕ್ಷ ನೀಡಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಕಿರಿಕ್ ಆಗಿದೆ. ಅಲ್ಲದೇ ಹೇಮಲತಾ ತನ್ನ ಪತಿ ತಿಮ್ಮಯ್ಯಗೆ ವಿಚಾರ ತಿಳಿಸಿ ಅವರಿಂದಲೂ ಬೆದರಿಕೆ ಹಾಕಿಸಿದ್ದರು. ಇದರಿಂದ ಮನನೊಂದ ಆನಂದ ಟ್ಯೂಷನ್ ಸೆಂಟರ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಆನಂದ ಹೇಮಲತಾ ಕಿರುಕುಳದ ಬಗ್ಗೆ ವಾಟ್ಸಾಪ್ ಸ್ಟೇಟಸ್ ನಲ್ಲಿ ಹಂಚಿಕೊಂಡಿದ್ದನು. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *