ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
